1:38 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕಲ್ಬುರ್ಗಿಯಿಂದ ಮಂಗಳೂರಿಗೆ ಶೀಘ್ರ ವಿಮಾನ ಸೇವೆ: 22ರಂದು ಬೆಂಗಳೂರಿನಿಂದ ಮೊದಲ ಯಾನ ಆರಂಭ

21/02/2024, 18:03

ಹೊಸದಿಲ್ಲಿ(reporterkarnataka.com): ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ನವದೆಹಲಿಯಲ್ಲಿ ಫೆಬ್ರವರಿ 20ರಂದು ಲೋಕಸಭಾ ಸದಸ್ಯರ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ಸ್ಪಂದನೆ ನೀಡಿ ಈ ವಿಷಯ ತಿಳಿಸಿದರು.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಇಂಡಿಗೋ ಸೇರಿದಂತೆ ಖಾಸಗಿ ವಿಮಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ನಾಗರಿಕ ವಿಮಾನಯಾನ ಖಾತೆಯ ಅಧಿಕಾರಿಗಳೊಂದಿಗೆ ಚರ್ಚೆ ಪ್ರಗತಿಯಲ್ಲಿದೆ. ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿಯಲ್ಲಿ ಪ್ರಾರಂಭಿಸಿದ ವಿಮಾನ ನಿಲ್ದಾಣಗಳಿಗೆ ಹೆಚ್ಚು ಹೆಚ್ಚು ವಿಮಾನಗಳ ಸಂಪರ್ಕ ಸೇವೆ ಹೊಂದಿ ಆ ಭಾಗದ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಲು ನಾಗರಿಕ ವಿಮಾನ ಯಾನ ಖಾತೆಯ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಆಸಕ್ತರಾಗಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಜಾಧವ್ ನುಡಿದರು.
ತಮ್ಮ 5 ವರ್ಷಗಳ ಅವಧಿಯಲ್ಲಿ ವಿಮಾನ ನಿಲ್ದಾಣದ ಪ್ರಗತಿಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ರಾತ್ರಿ ವಿಮಾನಗಳು ಇಳಿಯುವ ಸೌಲಭ್ಯ ಉತ್ತಮ ಹೆಜ್ಜೆ, ಬೆಂಗಳೂರು – ಕಲಬುರ್ಗಿ ಮಧ್ಯೆ ವಿಮಾನ ಸೇವೆ ಈಗಾಗಲೇ ಆಗಿದ್ದು ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ನಗರಗಳಿಗೆ ಸಂಪರ್ಕ ಕಲ್ಪಿಸುವ ಇಚ್ಛೆ ಹೊಂದಲಾಗಿದೆ ಎಂದು ಹೇಳಿದರು.
ಉಡಾನ್ ಯೋಜನೆಯಡಿ ಪ್ರಧಾನಮಂತ್ರಿಯವರು ಸಣ್ಣ ಸಣ್ಣ ನಗರಗಳಿಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯಿಂದ ಸಾಮಾನ್ಯ ಜನರು ಕೂಡ ವಿಮಾನ ಸಂಚಾರದ ಲಾಭವನ್ನು ಪಡೆಯುತ್ತಿರುವುದು ಸಂತಸದ ಸಂಗತಿ. ದೇಶದ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಸಂಚರಿಸುವ ಕನಸು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ತಿಳಿಸಿದರು.
ಫೆಬ್ರವರಿ 22ರಂದು ರಾತ್ರಿ 8 ಗಂಟೆಗೆ ಮೊದಲ ವಿಮಾನ ಬೆಂಗಳೂರಿನಿಂದ ಕಲ್ಬುರ್ಗಿಯಲ್ಲಿ ಬಂದು ಇಳಿಯುವ ಸಂದರ್ಭದಲ್ಲಿ ತಾನು ಖುದ್ದಾಗಿ ಹಾಜರಿದ್ದು ಶುಭಕೋರುವವನಿದ್ದೇನೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು