1:26 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲ್ಬುರ್ಗಿಯಿಂದ ಮಂಗಳೂರಿಗೆ ಶೀಘ್ರ ವಿಮಾನ ಸೇವೆ: 22ರಂದು ಬೆಂಗಳೂರಿನಿಂದ ಮೊದಲ ಯಾನ ಆರಂಭ

21/02/2024, 18:03

ಹೊಸದಿಲ್ಲಿ(reporterkarnataka.com): ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ನವದೆಹಲಿಯಲ್ಲಿ ಫೆಬ್ರವರಿ 20ರಂದು ಲೋಕಸಭಾ ಸದಸ್ಯರ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ಸ್ಪಂದನೆ ನೀಡಿ ಈ ವಿಷಯ ತಿಳಿಸಿದರು.
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ. ಈಗಾಗಲೇ ಇಂಡಿಗೋ ಸೇರಿದಂತೆ ಖಾಸಗಿ ವಿಮಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ನಾಗರಿಕ ವಿಮಾನಯಾನ ಖಾತೆಯ ಅಧಿಕಾರಿಗಳೊಂದಿಗೆ ಚರ್ಚೆ ಪ್ರಗತಿಯಲ್ಲಿದೆ. ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷೆಯ ಉಡಾನ್ ಯೋಜನೆಯಡಿಯಲ್ಲಿ ಪ್ರಾರಂಭಿಸಿದ ವಿಮಾನ ನಿಲ್ದಾಣಗಳಿಗೆ ಹೆಚ್ಚು ಹೆಚ್ಚು ವಿಮಾನಗಳ ಸಂಪರ್ಕ ಸೇವೆ ಹೊಂದಿ ಆ ಭಾಗದ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಲು ನಾಗರಿಕ ವಿಮಾನ ಯಾನ ಖಾತೆಯ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಆಸಕ್ತರಾಗಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಜಾಧವ್ ನುಡಿದರು.
ತಮ್ಮ 5 ವರ್ಷಗಳ ಅವಧಿಯಲ್ಲಿ ವಿಮಾನ ನಿಲ್ದಾಣದ ಪ್ರಗತಿಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದು ರಾತ್ರಿ ವಿಮಾನಗಳು ಇಳಿಯುವ ಸೌಲಭ್ಯ ಉತ್ತಮ ಹೆಜ್ಜೆ, ಬೆಂಗಳೂರು – ಕಲಬುರ್ಗಿ ಮಧ್ಯೆ ವಿಮಾನ ಸೇವೆ ಈಗಾಗಲೇ ಆಗಿದ್ದು ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ನಗರಗಳಿಗೆ ಸಂಪರ್ಕ ಕಲ್ಪಿಸುವ ಇಚ್ಛೆ ಹೊಂದಲಾಗಿದೆ ಎಂದು ಹೇಳಿದರು.
ಉಡಾನ್ ಯೋಜನೆಯಡಿ ಪ್ರಧಾನಮಂತ್ರಿಯವರು ಸಣ್ಣ ಸಣ್ಣ ನಗರಗಳಿಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಯೋಜನೆಯಿಂದ ಸಾಮಾನ್ಯ ಜನರು ಕೂಡ ವಿಮಾನ ಸಂಚಾರದ ಲಾಭವನ್ನು ಪಡೆಯುತ್ತಿರುವುದು ಸಂತಸದ ಸಂಗತಿ. ದೇಶದ ಸಾಮಾನ್ಯ ಜನರು ಕೂಡ ವಿಮಾನದಲ್ಲಿ ಸಂಚರಿಸುವ ಕನಸು ಸಾಕಾರಗೊಳ್ಳುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ತಿಳಿಸಿದರು.
ಫೆಬ್ರವರಿ 22ರಂದು ರಾತ್ರಿ 8 ಗಂಟೆಗೆ ಮೊದಲ ವಿಮಾನ ಬೆಂಗಳೂರಿನಿಂದ ಕಲ್ಬುರ್ಗಿಯಲ್ಲಿ ಬಂದು ಇಳಿಯುವ ಸಂದರ್ಭದಲ್ಲಿ ತಾನು ಖುದ್ದಾಗಿ ಹಾಜರಿದ್ದು ಶುಭಕೋರುವವನಿದ್ದೇನೆ ಎಂದು ಈ ಸಂದರ್ಭದಲ್ಲಿ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು