11:52 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಧಾನ ಸಭೆ ಕಲಾಪ ವೀಕ್ಷಣೆ: ಬೆಂಡೋಡಿ ಸರಕಾರಿ ಶಾಲಾ ಪುಟಾಣಿಗಳು ಫುಲ್ ಖುಷ್; ವ್ಯವಸ್ಥೆ ಮಾಡಿಕೊಟ್ಟ ಸ್ಪೀಕರ್ ಖಾದರ್

22/02/2024, 17:36

ಸುಳ್ಯ(reporterkarnataka.com): ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸರಕಾರಿ ಕಿರಿಯ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಬೆಂಗಳೂರಿನ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭಾ ಕಲಾಪ ವೀಕ್ಷಿಸಿದರು.
ಬೆಂಡೋಡಿ ಶಾಲಾ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ನೇತೃತ್ವದಲ್ಲಿ ಶಾಲೆಯ 14 ಮಂದಿ ಪುಟಾಣಿಗಳು ವಿಧಾನ ಸಭಾ ಕಲಾಪ ವೀಕ್ಷಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಶಾಲಾ ಬೇಡಿಕೆಗಳ ಬಗ್ಗೆ ಮಕ್ಕಳು ಮನವಿ ಸಲ್ಲಿಸಿದರು. ಬಳಿಕ ಯು.ಟಿ.ಖಾದರ್ ಅವರ ಜೊತೆಗೆ ವಿಧಾನ ಸೌಧದ ಮುಂಭಾಗ ಪೊಟೊ ತೆಗೆಸಿಕೊಂಡರು. ಪ್ರಥಮ ಬಾರಿಗೆ ವಿಧಾನ ಸಭಾ ಕಲಾಪ ವೀಕ್ಷಿಸಿದ ಮಕ್ಕಳು ಸಂತಸ ವ್ಯಕ್ತಪಡಿಸಿದರು.
ಇತ್ತೀಚೆಗೆ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕೊಲ್ಲಮೊಗ್ರು ವಿಗೆ ಆಗಮಿಸಿದ್ದ ಯು.ಟಿ.ಖಾದರ್ ಅವರು ಗ್ರಾಮದ ಸರಕಾರಿ ಶಾಲೆಯೊಂದರ ಮಕ್ಕಳಿಗೆ ವಿಧಾನ ಸಭಾ ಕಲಾಪ ವೀಕ್ಷಣೆಗೆ ವ್ಯವಸ್ಥೆ ಮಾಡುವ ಭರವಸೆ ನೀಡಿದಂತೆ ಕಲಾಪ ವಿಕ್ಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು