10:56 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಜೆಕಾರಿನಲ್ಲಿ ಫೆಬ್ರವರಿ 25ರಂದು ಬೃಹತ್ ಹೃದಯ ತಪಾಸಣಾ ಶಿಬಿರ

23/02/2024, 13:19

ಕಾರ್ಕಳ(reporterkarnataka.com): ಕೊರೊನಾ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದ್ದು, ನಗರಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘ ಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.
ಅಜೆಕಾರು ಶ್ರೀ ರಾಮ ಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25ರಂದು ಅಜೆಕಾರು ರಾಮ ಮಂದಿರದಲ್ಲಿ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರವು ಬೆ.8ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ. ಪದ್ಮನಾಭ ಕಾಮತ್ ತಂಡವೇ ನೇತೃತ್ವ ವಹಿಸಿದೆ.
ಸಾಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು, ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು,ಹೃದಯ ತೊಂದರೆ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಫೆ.19ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನಿಗದಿಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.
ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ.
ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ. ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ.

ಇತ್ತೀಚಿನ ಸುದ್ದಿ

ಜಾಹೀರಾತು