9:36 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಅಜೆಕಾರಿನಲ್ಲಿ ಫೆಬ್ರವರಿ 25ರಂದು ಬೃಹತ್ ಹೃದಯ ತಪಾಸಣಾ ಶಿಬಿರ

23/02/2024, 13:19

ಕಾರ್ಕಳ(reporterkarnataka.com): ಕೊರೊನಾ ಕಾಲಘಟ್ಟದ ಬಳಿಕ ದೇಶದಲ್ಲಿ ಹೃದಯಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರ ಏರುಗತಿಯಲ್ಲಿ ಸಾಗುತ್ತಿದ್ದು, ನಗರಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಬೇಕಾದ ಸುಸಜ್ಜಿತ ಆಸ್ಪತ್ರೆಗಳು ಇವೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಆಸ್ಪತ್ರೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಹೃದಯಕ್ಕೆ  ಸ್ಥಳೀಯ ಸಂಘ ಸಂಸ್ಥೆಗಳು  ಸೇರಿದಂತೆ ಈ  ಬೃಹತ್ ಹೃದಯ ತಪಾಸಣಾ ಶಿಬಿರಕ್ಕೆ ಕೈಜೋಡಿಸಿವೆ.
ಅಜೆಕಾರು ಶ್ರೀ ರಾಮ ಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಮಾಹೆ ಮಣಿಪಾಲ, ಕಾರ್ಡಿಯಾಲಜಿ ಅಟ್ ಡೋರ್ಸ್ಟೆಪ್ ಫೌಂಡೇಶನ್ (ಕ್ಯಾಡ್) ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಹೆಸರಾಂತ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಅವರ ತಂಡದಿಂದ ನೇತೃತ್ವದಲ್ಲಿ ಫೆ.25ರಂದು ಅಜೆಕಾರು ರಾಮ ಮಂದಿರದಲ್ಲಿ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರವು ಬೆ.8ರಿಂದ ಮಧ್ಯಾಹ್ನ 12.30 ವರೆಗೆ ನಡೆಯಲಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ಅಜೆಕಾರು, ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮುನಿಯಾಲು, ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನ , ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕರು ಪ್ರಯೋಜನ ಪಡೆಯಬಹುದಾಗಿದೆ.
ಸುಮಾರು ಒಂದು ಸಾವಿರಕ್ಕೂ ಹೆಚ್ಚು ಹೃದ್ರೋಗ ತಪಾಸಣಾ  ಶಿಬಿರಗಳನ್ನು ಆಯೋಜಿಸಿ   ಯಶಸ್ವಿ ಯಾಗಿರುವ ಮಂಗಳೂರಿನ ಡಾ. ಪದ್ಮನಾಭ ಕಾಮತ್ ತಂಡವೇ ನೇತೃತ್ವ ವಹಿಸಿದೆ.
ಸಾಮಾನ್ಯ ಹೃದಯ ತಪಾಸಣೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿರುವವರು, ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವವರು, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್ ಹಾರ್ಡ್ ರಿಮಾಟಿಕ್ ಹಾರ್ಟ್ ತೊಂದರೆಗೆ ಒಳಗಾದರು,ಹೃದಯ ತೊಂದರೆ ಸಂಬಂಧಿತ ಎಲ್ಲಾ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಫೆ.19ರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ನಿಗದಿಪಡಿಸಿದ ಸೋಮವಾರದಿಂದ ಗ್ರಾಮ‌ ವ್ಯಾಪ್ತಿಗಳ ಎಲ್ಲಾ ಇಸಿಜಿ ಕೇಂದ್ರ ಗಳಲ್ಲಿ ಪೂರ್ವದಲ್ಲಿ ರಿಜಿಸ್ಟ್ರಾರ್ ಮಾಡಬಹುದು. ಇದರಿಂದಾಗಿ ಸಲಹೆ ಸೂಚನೆಗಳನ್ನು ವೇಗವಾಗಿ ಪಡೆಯಲು ಸಾಧ್ಯವಾಗಲಿದೆ. ಅಜೆಕಾರು ವ್ಯಾಪ್ತಿಯಲ್ಲಿ 4 ಇಸಿಜಿ ಕೇಂದ್ರಗಳಿದ್ದು ಹೆಚ್ಚಿನ ಪ್ರಯೋಜನ ಪಡೆಯಬಹುದಾಗಿದೆ.
ಪ್ರತಿಯೊಂದು ಗ್ರಾಮೀಣ ಅರೋಗ್ಯ ಶಿಬಿರವು ತನ್ನದೇ ಆದ ಒಂದು ವೈಶಿಷ್ಟ್ಯತೆ ಹೊಂದಿದೆ.
ನಾನು ಮಾಡುವ ಪ್ರಯತ್ನ ಕೇವಲ ವೈದ್ಯನಾಗಿ ಅಲ್ಲಾ . ಪ್ರತಿಯೊಂದು ಶಿಬಿರ ದಲ್ಲಿ ನಾನು ಸ್ವಯಂಸೇವಕನಾಗಿ ದುಡಿದಿದ್ದೇನೆ. ಆರೋಗ್ಯವೇ ನಮ್ಮ ಆಸ್ತಿಯಾಗಿದೆ. ನಾವೆಲ್ಲರೂ ಜಾತಿ ಮತ ಧರ್ಮ ತೊರೆದು ಈ ಶಿಬಿರದಲ್ಲಿ ಭಾಗವಹಿಸೋಣ.

ಇತ್ತೀಚಿನ ಸುದ್ದಿ

ಜಾಹೀರಾತು