2:39 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಆನಂದ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದೇನು? 

11/08/2021, 12:25

ಬೆಂಗಳೂರು(reporterkarnataka.com): ತನಗೆ ನೀಡಿದ ಖಾತೆಯಿಂದ ಅಸಮಾಧಾನಗೊಂದ ಸಚಿವ ಆನಂದ್ ಸಿಂಗ್ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಖಾತೆ ಹಂಚಿಕೆ ಬಳಿಕ ಸಂಪುಟದಲ್ಲಿ ತಕ್ಕ ಮಟ್ಟಿಗೆ ಅಸಮಾಧಾನ ಭುಗಿಲೆದ್ದಿದ್ದು, ಎಂ.ಟಿ. ಬಿ. ನಾಗರಾಜ್, ಆನಂದ ಸಿಂಗ್ ಸೇರಿದಂತೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂದ್ ಸಿಂಗ್ ಅವರು ರಾಜೀನಾಮೆಗೂ ಮುಂದಾಗಿದ್ದರು ಎನ್ನಲಾಗಿದೆ. ಆನಂದ್ ಸಿಂಗ್ ಅವರಿಗೆ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಬಳ್ಳಾರಿ ಮೂಲದ ಗಣಿ ಉದ್ಯಮಿಯಾದ ಆನಂದ್ ಸಿಂಗ್ ಅವರಿಗೆ ಪರಿಸರ ಖಾತೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎನ್ನಲಾಗಿದೆ. ಅದೇ ರೀತಿ ಬಹುಕೋಟಿ ಒಡೆಯನಾದ ಎಂಟಿಬಿ ಅವರಿಗೆ ಪೌರಾಡಳಿತ ಖಾತೆ ಬೇಡವಾಗಿದೆ. ಆನಂದ್ ಸಿಂಗ್ ಅವರು ಇಂಧನ ಮತ್ತು ಲೋಕೋಪಯೋಗಿ ಖಾತೆಯ ಮೇಲೆ ಕಣ್ಣಿಟ್ಟಿದ್ದರು.ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ನೀಡಿದ ಇಂಧನ ಖಾತೆಯ ಮೇಲೆ ಆನಂದ್ ಸಿಂಗ್ ಈಗ ದೃಷ್ಟಿ ಹಾಯಿಸಿದ್ದಾರೆ. ನೂತನವಾಗಿ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ, ಸುನಿಲ್ ಕುಮಾರ್ ಗೆ ಇಂಧನ ನೀಡಿರುವ ಬಗ್ಗೆ ಹಲವು ಮಂದಿ ಹಿರಿಯ ಸಚಿವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಆನಂದ ಸಿಂಗ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನಿರಾಕರಿಸಿದ್ದಾರೆ. ಆನಂದ್ ಸಿಂಗ್ ತನ್ನ ಸಂಪರ್ಕದಲ್ಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು