10:13 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ; 91 ಸಾವಿರ ರೂ. ಮೌಲ್ಯದ ಸೊತ್ತು ವಶ

24/02/2024, 00:28

ಮಂಗಳೂರು(reporterkarnataka.com): ಪಡುಶೆಡ್ಡೆ ಗ್ರಾಮದ ಬೊಂದೆಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೆ ಟ್ರ್ಯಾಕ್ ನ ರೈಲ್ವೆ ಅಂಡರ್ ಪಾಸ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವ‌ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡುಶೆಡ್ಡೆ ಶಿವನಗರದ ನಿವಾಸಿಯಾದ ಮೊಹಮ್ಮದ್ ರಿಜ್ವಾನ್ (34) ಬಂಧಿತ ಆರೋಪಿ. ಈತ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿಯಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 91,280/- ರೂ. ಎಂದು ಅಂದಾಜಿಸಲಾಗಿದೆ.
ಈತನ ಮೇಲೆ ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆ ಹಾಗೂ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆ, ಮಾದಕ ವಸ್ತು ಸೇವನೆ ಪ್ರಕರಣಗಳು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು