1:46 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಉಳ್ಳಾಲ: ಬಾಷಾ ಮನೆ ಎದುರು ಭಜರಂಗದಳ ಪ್ರತಿಭಟನೆ: ಪೊಲೀಸರಿಂದ ಪ್ರತಿಭಟನಾನಿರತರ ಬಂಧನ 

11/08/2021, 13:16

ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಇತ್ತೀಚೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡದಿಂದ ದಾಳಿಗೀಡಾದ ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ಎದುರು ಭಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.


ಭಜರಂಗ ದಳ ಹಿರಿಯ ನಾಯಕ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮಾಸ್ತಿಕಟ್ಟೆಯಲ್ಲಿರುವ ಬಾಷಾ ಅವರ ಮನೆಯ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. 


ಎನ್ ಐಎ ತಂಡ ಇತ್ತೀಚೆಗೆ  ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ದಾಳಿ ನಡೆಸಿತ್ತು. ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು