1:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

24/02/2024, 15:58

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.2..2024ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಅವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ಹೆಸರಾಂತ ವಕೀಲರಾದ ಮಯೂರ ಕೀರ್ತಿ ಹಾಗೂ ಶರತ್ ಕುಮಾರ್ ಬಿ. ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಚ್ಚಿಲ ಅವರನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಗೀತಾ ಡಿ. ಅವರು ಡಿ. ಕೊಂಬೇಗೌಡ ಹಾಗೂ ಕೋಮಲ ಅವರ ಪುತ್ರಿಯಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು