1:32 AM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ

24/02/2024, 19:28

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ಫಲಾನುಭವಿ ಶಾಲೆಗಳು ಮುಖ್ಯವಾಗಿ ಲ್ಯಾಬ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಲೈಬ್ರರಿಗಳು, ಕ್ರೀಡಾ ಉಪಕರಣಗಳು, ಕಲಾ ಕೊಠಡಿ ಇತ್ಯಾದಿಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ.
ನೀರಿನ ಸಂರಕ್ಷಣೆ, ತ್ಯಾಜ್ಯ ಮರುಬಳಕೆ, ಇಂಧನ-ಸಮರ್ಥ ಮೂಲಸೌಕರ್ಯ ಮತ್ತು ಪಠ್ಯಕ್ರಮದಲ್ಲಿ ಸಾವಯವ ಜೀವನಶೈಲಿಯ ಏಕೀಕರಣದೊಂದಿಗೆ ಹಸಿರು ಶಾಲೆಗಳಾಗಿ ಅಭಿವೃದ್ಧಿಗೊಳ್ಳುತ್ತವೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಸಮಾಜದಲ್ಲಿ ಜವಾಬ್ದಾರಿ ನಿರ್ವಹಿಸಲು ಶಕ್ತಿ,ಸಾಮರ್ಥ್ಯ, ಸವಾಲು ಎದುರಿಸಲು ಪಿಎಂಶ್ರೀ ಯೋಜನೆ ನೆರವಾಗುತ್ತದೆ ಎಂದರು.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ಘೋಷಿಸಿದ್ದು, 14,500 ಶಾಲೆಗಳಲ್ಲಿ ಈ ಶಾಲೆಯೂ ಒಂದು‌ಎಂದು ನುಡಿದರು.
ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನೆಯ ವಿಧಾನಕ್ಕೆ ಒತ್ತು ನೀಡಲಾಗಿದ್ದು ಸರ್ವಾಂಗೀಣವಾಗಿ ವಿದ್ಯಾರ್ಥಿಯ ಪ್ರತಿಭೆಯನ್ನು ಪ್ರೋತ್ಸಾಹಿಸುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭ ಯಾವುದೇ ಕಾರಣಕ್ಕೂ ಧರ್ಮ, ರಾಜಕೀಯ ಶಾಲಾ ವಠಾರ ಸುಳಿಯದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಣವೇ ಆದ್ಯತೆಯಾಗಬೇಕು ಎಂದು ಸೂಚನೆ ನೀಡಿದರು. ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಶೆಟ್ಟಿ ಮುತ್ತೂರು, ಮುತ್ತೂರು ಪಂಚಾಯತ್ ಉಪಾಧ್ಯಕ್ಷರು ಮತ್ತು ಪಂ. ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಭಾಗದ ಶಾಲಾ ಹಿತೈಷಿಗಳು,ಶಾಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು