1:48 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ

24/02/2024, 19:28

ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ಫಲಾನುಭವಿ ಶಾಲೆಗಳು ಮುಖ್ಯವಾಗಿ ಲ್ಯಾಬ್‌ಗಳು, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಲೈಬ್ರರಿಗಳು, ಕ್ರೀಡಾ ಉಪಕರಣಗಳು, ಕಲಾ ಕೊಠಡಿ ಇತ್ಯಾದಿಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳೊಂದಿಗೆ ಸುಸಜ್ಜಿತವಾಗಿರುತ್ತವೆ.
ನೀರಿನ ಸಂರಕ್ಷಣೆ, ತ್ಯಾಜ್ಯ ಮರುಬಳಕೆ, ಇಂಧನ-ಸಮರ್ಥ ಮೂಲಸೌಕರ್ಯ ಮತ್ತು ಪಠ್ಯಕ್ರಮದಲ್ಲಿ ಸಾವಯವ ಜೀವನಶೈಲಿಯ ಏಕೀಕರಣದೊಂದಿಗೆ ಹಸಿರು ಶಾಲೆಗಳಾಗಿ ಅಭಿವೃದ್ಧಿಗೊಳ್ಳುತ್ತವೆ. ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಸಮಾಜದಲ್ಲಿ ಜವಾಬ್ದಾರಿ ನಿರ್ವಹಿಸಲು ಶಕ್ತಿ,ಸಾಮರ್ಥ್ಯ, ಸವಾಲು ಎದುರಿಸಲು ಪಿಎಂಶ್ರೀ ಯೋಜನೆ ನೆರವಾಗುತ್ತದೆ ಎಂದರು.
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆಯನ್ನು ಘೋಷಿಸಿದ್ದು, 14,500 ಶಾಲೆಗಳಲ್ಲಿ ಈ ಶಾಲೆಯೂ ಒಂದು‌ಎಂದು ನುಡಿದರು.
ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನೆಯ ವಿಧಾನಕ್ಕೆ ಒತ್ತು ನೀಡಲಾಗಿದ್ದು ಸರ್ವಾಂಗೀಣವಾಗಿ ವಿದ್ಯಾರ್ಥಿಯ ಪ್ರತಿಭೆಯನ್ನು ಪ್ರೋತ್ಸಾಹಿಸುದು ಪ್ರಧಾನಿ ಮೋದಿಯವರ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭ ಯಾವುದೇ ಕಾರಣಕ್ಕೂ ಧರ್ಮ, ರಾಜಕೀಯ ಶಾಲಾ ವಠಾರ ಸುಳಿಯದಂತೆ ಎಚ್ಚರಿಕೆ ವಹಿಸಬೇಕು. ಶಿಕ್ಷಣವೇ ಆದ್ಯತೆಯಾಗಬೇಕು ಎಂದು ಸೂಚನೆ ನೀಡಿದರು. ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ,ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಶೆಟ್ಟಿ ಮುತ್ತೂರು, ಮುತ್ತೂರು ಪಂಚಾಯತ್ ಉಪಾಧ್ಯಕ್ಷರು ಮತ್ತು ಪಂ. ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಭಾಗದ ಶಾಲಾ ಹಿತೈಷಿಗಳು,ಶಾಲಾ ಭೋದಕ ಮತ್ತು ಬೋಧಕೇತರ ಸಿಬ್ಬಂದಿಗಳು
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು