8:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ

24/02/2024, 20:49

ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು, ಕುಟುಂಬ,ಸಮಾಜದ ಜತೆಗೂ ಸಮತೋಲನ ಕಾಯ್ದುಕೊಂಡಾಗ ಬದುಕು ಯಶಸ್ಸು ಮತ್ತು ಸಾಧನೆಯಿಂದ ಕೂಡಿರಲು ಸಾಧ್ಯ ಎಂದು ಟಾಟಾ ಪ್ರಾಜೆಕ್ಟ್ ಲಿ. ಇದರ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಪೈ ಹೇಳಿದರು. ಅವರು ಶನಿವಾರ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ಲ್ಯಾಬ್ ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೇಶ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಹೇಳಿದರು.


ಇನ್ನೋರ್ವ ಮುಖ್ಯ ಅತಿಥಿ ಏಷ್ಯಾ ಎಟ್ ವರ್ಲಿ ಅಧ್ಯಕ್ಷ ದಿನೇಶ್ ಪಿಸುರ್ಲೇಂಕರ್ ಮಾತನಾಡಿ ಭಾರತೀಯ ಯುವ ಸಂಪನ್ಮೂಲಕ್ಕೆ ಜಾಗತಿಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಜೀವನದಲ್ಲಿ ಶಿಸ್ತು, ಉತ್ತಮ ಮನೊಭಾವ,ಚುರುಕುತನದ ಜತೆಗೆ ಕಠಿಣ ಪರಿಶ್ರಮವಿದ್ದಾಗ ಜೀವನವನ್ನು ಆನಂದಿಸಲು ಸಾಧ್ಯ ಎಂದರು.
ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಎಚ್. ಆರ್. ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ ಸ್ವಾಗತಿಸಿ ಆಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್ ವಂದಿಸಿದರು.
ಸಹಪ್ರಾಧ್ಯಾಪಕಿ ಕ್ಯಾರಲ್ ಡಿ. ಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು