7:26 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ

24/02/2024, 20:49

ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು, ಕುಟುಂಬ,ಸಮಾಜದ ಜತೆಗೂ ಸಮತೋಲನ ಕಾಯ್ದುಕೊಂಡಾಗ ಬದುಕು ಯಶಸ್ಸು ಮತ್ತು ಸಾಧನೆಯಿಂದ ಕೂಡಿರಲು ಸಾಧ್ಯ ಎಂದು ಟಾಟಾ ಪ್ರಾಜೆಕ್ಟ್ ಲಿ. ಇದರ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಪೈ ಹೇಳಿದರು. ಅವರು ಶನಿವಾರ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ಲ್ಯಾಬ್ ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೇಶ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಹೇಳಿದರು.


ಇನ್ನೋರ್ವ ಮುಖ್ಯ ಅತಿಥಿ ಏಷ್ಯಾ ಎಟ್ ವರ್ಲಿ ಅಧ್ಯಕ್ಷ ದಿನೇಶ್ ಪಿಸುರ್ಲೇಂಕರ್ ಮಾತನಾಡಿ ಭಾರತೀಯ ಯುವ ಸಂಪನ್ಮೂಲಕ್ಕೆ ಜಾಗತಿಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಜೀವನದಲ್ಲಿ ಶಿಸ್ತು, ಉತ್ತಮ ಮನೊಭಾವ,ಚುರುಕುತನದ ಜತೆಗೆ ಕಠಿಣ ಪರಿಶ್ರಮವಿದ್ದಾಗ ಜೀವನವನ್ನು ಆನಂದಿಸಲು ಸಾಧ್ಯ ಎಂದರು.
ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಎಚ್. ಆರ್. ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ ಸ್ವಾಗತಿಸಿ ಆಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್ ವಂದಿಸಿದರು.
ಸಹಪ್ರಾಧ್ಯಾಪಕಿ ಕ್ಯಾರಲ್ ಡಿ. ಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು