12:05 AM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ

24/02/2024, 20:49

ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು, ಕುಟುಂಬ,ಸಮಾಜದ ಜತೆಗೂ ಸಮತೋಲನ ಕಾಯ್ದುಕೊಂಡಾಗ ಬದುಕು ಯಶಸ್ಸು ಮತ್ತು ಸಾಧನೆಯಿಂದ ಕೂಡಿರಲು ಸಾಧ್ಯ ಎಂದು ಟಾಟಾ ಪ್ರಾಜೆಕ್ಟ್ ಲಿ. ಇದರ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಪೈ ಹೇಳಿದರು. ಅವರು ಶನಿವಾರ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ಲ್ಯಾಬ್ ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೇಶ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಹೇಳಿದರು.


ಇನ್ನೋರ್ವ ಮುಖ್ಯ ಅತಿಥಿ ಏಷ್ಯಾ ಎಟ್ ವರ್ಲಿ ಅಧ್ಯಕ್ಷ ದಿನೇಶ್ ಪಿಸುರ್ಲೇಂಕರ್ ಮಾತನಾಡಿ ಭಾರತೀಯ ಯುವ ಸಂಪನ್ಮೂಲಕ್ಕೆ ಜಾಗತಿಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಜೀವನದಲ್ಲಿ ಶಿಸ್ತು, ಉತ್ತಮ ಮನೊಭಾವ,ಚುರುಕುತನದ ಜತೆಗೆ ಕಠಿಣ ಪರಿಶ್ರಮವಿದ್ದಾಗ ಜೀವನವನ್ನು ಆನಂದಿಸಲು ಸಾಧ್ಯ ಎಂದರು.
ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಎಚ್. ಆರ್. ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ ಸ್ವಾಗತಿಸಿ ಆಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್ ವಂದಿಸಿದರು.
ಸಹಪ್ರಾಧ್ಯಾಪಕಿ ಕ್ಯಾರಲ್ ಡಿ. ಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು