6:10 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ನಂಜನಗೂಡು ಸಮೀಪದ ಹರತಲೆ ಗ್ರಾಮದಲ್ಲಿ ಸಂಭ್ರಮ- ಸಡಗರದಿಂದ ನಡೆದ ಶ್ರೀ ರಾಮೋತ್ಸವ: ಮರ್ಯಾದ ಪುರುಷನ‌ ಭವ್ಯ ಮೆರವಣಿಗೆ

26/02/2024, 21:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಮರ್ಯಾದ ಪುರುಷ ಶ್ರೀ ರಾಮನ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ರಾಮನ ಭಾವಚಿತ್ರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.


ಶ್ರೀ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಗ್ರಾಮದ ಮುಖಂಡ ಚಿಕ್ಕರಂಗನಾಯಕ ಉತ್ಸವಕ್ಕೆ ಚಾಲನೆ ನೀಡಿದರು.
ಬಳಿಕ ಉತ್ಸವವು ಸತ್ತಿಗೆ, ಸುರಪಾಣಿ, ಛತ್ರಿ ಚಾಮರ ಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು ಮೆರವಣಿಗೆಯುದ್ದಕ್ಕೂ ಗ್ರಾಮದ ಮಹಿಳೆಯರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ಗ್ರಾಮದ ಮುಖಂಡರು ಹಾಗೂ ಯುವಕರು ತಮಟೆ ವಾದ್ಯಕ್ಕೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರೆ, ಮಂಗಳವಾದ್ಯ, ತಮಟೆ ವಾದ್ಯ, ಕಂಸಾಳೆ ಕುಣಿತ ಸೇರಿದಂತೆ ವಿವಿಧ ಜಾನಪದಗಳು ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಶ್ರೀ ರಾಮೋತ್ಸವದ ಪ್ರಯುಕ್ತ ಇಡೀ ಗ್ರಾಮವನ್ನೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿ ಒಂದು ರೀತಿ ಜಾತ್ರೆಯೋಪಾದಿಯಲ್ಲಿ ಶ್ರೀರಾಮನ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಗ್ರಾಮದ ಮುಖಂಡ ಹರ ತಲೆ ಚಿಕ್ಕರಂಗನಾಯಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದ್ ರಾಜ್, ಯಜಮಾನರುಗಳಾದ ಚಿನ್ನಸ್ವಾಮಿ, ರಾಜು, ಚಿಕ್ಕಣ್ಣ,ಮರಿಗಂಡ ನಾಯಕ ಸೇರಿದಂತೆ ಕಳಲೆ ಗಡಿ ಯಜಮಾನರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು