4:40 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ನಂಜನಗೂಡು ಸಮೀಪದ ಹರತಲೆ ಗ್ರಾಮದಲ್ಲಿ ಸಂಭ್ರಮ- ಸಡಗರದಿಂದ ನಡೆದ ಶ್ರೀ ರಾಮೋತ್ಸವ: ಮರ್ಯಾದ ಪುರುಷನ‌ ಭವ್ಯ ಮೆರವಣಿಗೆ

26/02/2024, 21:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಮರ್ಯಾದ ಪುರುಷ ಶ್ರೀ ರಾಮನ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ರಾಮನ ಭಾವಚಿತ್ರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.


ಶ್ರೀ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಗ್ರಾಮದ ಮುಖಂಡ ಚಿಕ್ಕರಂಗನಾಯಕ ಉತ್ಸವಕ್ಕೆ ಚಾಲನೆ ನೀಡಿದರು.
ಬಳಿಕ ಉತ್ಸವವು ಸತ್ತಿಗೆ, ಸುರಪಾಣಿ, ಛತ್ರಿ ಚಾಮರ ಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು ಮೆರವಣಿಗೆಯುದ್ದಕ್ಕೂ ಗ್ರಾಮದ ಮಹಿಳೆಯರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ಗ್ರಾಮದ ಮುಖಂಡರು ಹಾಗೂ ಯುವಕರು ತಮಟೆ ವಾದ್ಯಕ್ಕೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರೆ, ಮಂಗಳವಾದ್ಯ, ತಮಟೆ ವಾದ್ಯ, ಕಂಸಾಳೆ ಕುಣಿತ ಸೇರಿದಂತೆ ವಿವಿಧ ಜಾನಪದಗಳು ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಶ್ರೀ ರಾಮೋತ್ಸವದ ಪ್ರಯುಕ್ತ ಇಡೀ ಗ್ರಾಮವನ್ನೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿ ಒಂದು ರೀತಿ ಜಾತ್ರೆಯೋಪಾದಿಯಲ್ಲಿ ಶ್ರೀರಾಮನ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಗ್ರಾಮದ ಮುಖಂಡ ಹರ ತಲೆ ಚಿಕ್ಕರಂಗನಾಯಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದ್ ರಾಜ್, ಯಜಮಾನರುಗಳಾದ ಚಿನ್ನಸ್ವಾಮಿ, ರಾಜು, ಚಿಕ್ಕಣ್ಣ,ಮರಿಗಂಡ ನಾಯಕ ಸೇರಿದಂತೆ ಕಳಲೆ ಗಡಿ ಯಜಮಾನರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು