9:50 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬಲ್ಲಾಳರಾಯ ದುರ್ಗ: ಚಾರಣಕ್ಕೆ ಬಂದು ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಯುವಕ ಪತ್ತೆ: 3 ತಾಸಿಗೂ ಅಧಿಕ ಶೋಧ ಕಾರ್ಯಾಚರಣೆ

27/02/2024, 14:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಾಳರಾಯ ದುರ್ಗ ಹಾಗೂ ಭಂಡಾಜೆ ಫಾಲ್ಸ್ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಯುವಕ ಧನುಷ್ ಕಾಡಿನ ಮಧ್ಯೆ ಪತ್ತೆಯಾಗಿದ್ದಾನೆ.
ನಾಪತ್ತೆಯಾಗಿದ್ದ ಯುವಕನ
ಗೆಳೆಯರು ಸುಂಕ ಸಾಲೆ ಗ್ರಾಮಕ್ಕೆ ಬಂದು ಆದಿತ್ಯ ಎಂಬ ಯುವಕ 112 ಪೊಲೀಸ್ ವಾಹನಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದ. ಕೆಎಂಸಿ ಆಸ್ಪತ್ರೆಯಲ್ಲಿ MBBS ಅಭ್ಯಾಸ ಮಾಡುತ್ತಿದ್ದು 10 ಮಂದಿ ಗೆಳೆಯರು ಭಂಡಾಜೆ ಫಾಲ್ಸ್ ನೋಡಲು ಬಂದಿದ್ದರು. ಅದರಲ್ಲಿ ಧನುಷ್ ಎಂಬಾತನು ಸುಮಾರು 8 ಕಿಮೀ ಕಾಡಿನ ಮಧ್ಯದಲ್ಲಿ ಕಾಣೆಯಾಗಿದ್ದ. ಆತನ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಪೊಲೀಸರು ಸ್ಥಳಕ್ಕೆ ಹೋಗಿ ಆಲಿದ್ಧಾಂತಹ ಹುಡುಗರನ್ನು ವಿಚಾರಿಸಲಾಗಿ ಆತನು ತಪ್ಪಿಕೊಂಡಿರುವ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ ಸುಮಾರು ಮೂರುವರೆ ತಾಸು ಶೋಧ ಕಾರ್ಯಾಚರಣೆ ನಡೆಸಿ ನಾಪತ್ತೆಯಾಗಿದ್ದ ಯುವಕನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಯುವಕ ಕೊನೆಗೆ ಗುಡ್ಡದ ಪ್ರದೇಶದಲ್ಲಿ ಸುಮಾರು 700 ಅಡಿ ಕೆಳಗೆ ದಟ್ಟವಾದ ಅರಣ್ಯ ಮದ್ಯದಲ್ಲಿ ದಲ್ಲಿ ಒಬ್ಬನೇ ಸಿಕ್ಕಿಕೊಂಡು ನಿಂತಿರುವುದು ಕಂಡು ಬಂತು. ಪೊಲೀಸರು ಬರುವುದನ್ನು ಕಂಡು ಯುವಕ ಓಡೋಡಿ ಬಂದ. ನಂತರ ಶೋಧ ತಂಡದವರು ಆತನಿಗೆ ಧೈರ್ಯ ತುಂಬಿ ಕುಡಿಯಲು ನೀರು ಕೊಟ್ಟು ಸಮಾಧಾನಪಡಿಸಿ ಆತನನ್ನು ವಾಹನದ ಬಳಿಗೆ ಕರೆದು ತಂದರು. ನಂತರ ಆತನ ತಂದೆ ತಾಯಿ ಗಳಿಗೆ ಕರೆ ಮಾಡಿಸಿ ಮಾಹಿತಿ ನೀಡಲಾಯಿತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮೆಹಬೂಬ್ ಸಾಧನಿ, ಶಂಕರ್ ಬೋವಿ ಹಾಗೂ ಸ್ಥಳೀಯರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು