3:57 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ

28/02/2024, 10:26

ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ.
ಮೃತ ಬಾಲಕರನ್ನು ಅಗರಮೇಲು ನಿವಾಸಿ ಯಶ್ವಿತ್, ಹಳೆಯಂಗಡಿಯ ರಾಘವೇಂದ್ರ, ಚಿತ್ರಾಪುರದ ಅನ್ವಿತ್, ಗುಡ್ಡೆಕೊಪ್ಲದ ನಿರೂಪ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪೂರ್ವಭಾವಿ ಪರೀಕ್ಷೆ ಮುಗಿದಿದ್ದು ಬಳಿಕ ಯಶ್ವಿತ್, ರಾಘವೇಂದ್ರ, ಅನ್ವಿತ್ ಹಾಗೂ ನಿರೂಪ್ ನಾಪತ್ತೆ ಯಾಗಿದ್ದರು.
ಹಳೆಯಂಗಡಿ ಕರಿತೋಟದಲ್ಲಿ‌ ನಂದಿನಿ ನದಿಯಲ್ಲಿ ಈಜಾಡಲು ಹೋಗಿ ನಾಲ್ವರು ವಿದ್ಯಾರ್ಥಿಗಳು ಅಸುನೀಗಿದ್ದಾರೆ. ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಶಾಲೆ ಮತ್ತು ಬಸ್ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್‌ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್‌ ನಿಲ್ದಾಣದಲ್ಲಿ ಇಳಿದಿರುವುದನ್ನು ಖಚಿತಪಡಿಸಿಕೊಂಡಿದ್ದರು. ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್‌ ಟವ‌ರ್ ಲೊಕೇಶನ್‌ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ, ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.
ಸಂಶಯದಿಂದ ಸ್ಥಳೀಯರ ಸಹಕಾರದಿಂದ ನದಿಯಲ್ಲಿ ಹುಡುಕಾಡಿದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು