2:47 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಾಲ್ವರು ವಿದ್ಯಾರ್ಥಿಗಳ ದುರಂತ ಅಂತ್ಯ: ಶಾಸಕ ಡಾ. ಭರತ್ ಶೆಟ್ಟಿ ದಿಗ್ಬ್ರಮೆ, ಗೃಹ ಸಚಿವರಿಗೆ ಮಾಹಿತಿ

28/02/2024, 12:11

ಸುರತ್ಕಲ್(reporterkarnataka.com): ಸುರತ್ಕಲ್ ಶಾಲೆಯೊಂದರ ವಿದ್ಯಾರ್ಥಿಗಳು ಹಳೆಯಂಗಡಿ ಬಳಿಯ ನಂದಿನಿ ನದಿಯಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಬಗ್ಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ದಿಗ್ಬ್ರಮೆ, ಆಘಾತ ವ್ಯಕ್ತ ಪಡಿಸಿದ್ದಾರೆ.
ತಾನು ಬೆಂಗಳೂರಿನಲ್ಲಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಪ್ರಮುಖ ಅಧಿಕಾರಿಗಳನ್ನು ಕಳಿಸಲಾಗುದು. ತಾನು ಸ್ವತಹ ಗೃಹ ಸಚಿವರಿಗೆ ಮಾಹಿತಿ ನೀಡಿ ಕುಟುಂಬಕ್ಕೆ ಗರಿಷ್ಟ ಪರಿಹಾರ ಒದಗಿಸಲು ಮುಂದಾಗುತ್ತೇನೆ. ನೊಂದಿರುವ ಕುಟುಂಬಕ್ಕೆ ದೇವರು ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ವಿದ್ಯಾರ್ಥಿ ವೃಂದ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಸುರಕ್ಷತೆಯಿಂದಿರಲು ಗಮನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು