2:46 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಎನ್. ಎಸ್. ಪತ್ತಾರ್ ಅವರಿಂದ ‘ಸಬ್‌ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ

28/02/2024, 20:15

ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್‌ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ.
ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸುತ್ತದೆ. ಮಂಗಳೂರಿನ ಮಹಾಲಸ ಕಲಾ ಮಹಾವಿದ್ಯಾಲಯದ ಚಿತ್ರಕಲಾ ವಿಭಾಗದ ಮುಖ್ಯಸ್ಥರೂ ಆಗಿರುವ ಪ್ರತಿಷ್ಠಿತ ಕಲಾವಿದ ಎನ್.ಎಸ್. ಪತ್ತಾರ್, ಅವರು “ಸಬ್‌ಲೈಮ್ ಲಿರಿಕ್ಸ್” ಮೂಲಕ ತಮ್ಮ ಮೊದಲ ಏಕವ್ಯಕ್ತಿ ಪ್ರದರ್ಶನವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಉದ್ಘಾಟನಾ ಸಮಾರಂಭವು ಮಾರ್ಚ್ 1, 2024 ರಂದು ಸಂಜೆ 5 ಗಂಟೆಗೆ, ಗ್ಯಾಲರಿ ಆರ್ಕಿಡ್, ಹೇಮಾವತಿ ಕಟ್ಟಡ, ಬಲ್ಮಠ, ಮಂಗಳೂರು ಇಲ್ಲಿ ನಡೆಯಲಿದೆ.
ಆರ್ಕಿಟೆಕ್ಟ್ ಗುಲ್ಶನ್ ರೊಯ್, ಪ್ರದರ್ಶನವನ್ನು ಉದ್ಘಾಟಿಸಲಿರುವರು. ಮಹಾಲಸ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಬಾಬುರಾವ್, ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರದರ್ಶನದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 6ರ ವರೆಗೆ ಗ್ಯಾಲರಿ ತೆರೆದಿರುವುದೆಂದು ಗ್ಯಾಲರಿ ಆರ್ಕಿಡ್ ನಿರ್ದೇಶಕರಾದ ವಿಲಿಯಮ್ ಪಾಯ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು