6:12 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ

29/02/2024, 18:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಎರಡನೇ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀದೇವಿ ಹಾಗೂ ಭೂದೇವಿ ಸಮೇತರಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿತ್ತು. ಹುಲ್ಲಹಳ್ಳಿ ಸೇರಿದಂತೆ ತಾಲೂಕಿನ ವಿವಿಧಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಶ್ರೀ ವೆಂಕಟರಮಣ ಸ್ವಾಮಿ, ಶ್ರೀ ಅಲಮೇಲು ಮಂಗಮ್ಮ, ಗಣಪತಿ ಹಾಗೂ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಲಾಡು ವಿತರಣೆ ಮಾಡಲಾಯಿತು.
ಇದೇ ಸಂದರ್ಭ ನಂಜನಗೂಡಿನ ಚಿನ್ಮಯಿ ಶ್ರೀವಾರಿ ಭಜನಾ ಮಂಡಳಿಯವರು ನಡೆಸಿಕೊಟ್ಟ ಭಜನೆ ಹಾಗೂ ಉಷಾ ವೇಣುಗೋಪಾಲ್ ರವರ ನೂಪುರ ನೃತ್ಯಾಂಜಲಿ ತಂಡದ ಮಕ್ಕಳು ನಡೆಸಿಕೊಟ್ಟ ಭರತನಾಟ್ಯದ ನೃತ್ಯ ರೂಪಕಗಳು ನೋಡುಗರ ಮನಸೂರೆಗೊಂಡವು.
ಬಳಿಕ ಭಜನಾ ಮಂಡಳಿ ಹಾಗೂ ನೃತ್ಯ ತಂಡದವರಿಗೆ ದೇವಾಲಯದ ನಿರ್ಮಾತೃಗಳಾದ ವಿಜಯಲಕ್ಷ್ಮಿನಾರಾಯಣ್ ರೆಡ್ಡಿ ಕುಟುಂಬದವರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು