6:24 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ಅಲಮೇಲ ಅಮ್ಮ, ವೆಂಕಟರಮಣ ಸ್ವಾಮಿ ದೇಗುಲ ವಾರ್ಷಿಕೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ

29/02/2024, 18:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಅಮ್ಮನವರ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಎರಡನೇ ವಾರ್ಷಿಕೋತ್ಸವ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಎರಡನೇ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀದೇವಿ ಹಾಗೂ ಭೂದೇವಿ ಸಮೇತರಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿತ್ತು. ಹುಲ್ಲಹಳ್ಳಿ ಸೇರಿದಂತೆ ತಾಲೂಕಿನ ವಿವಿಧಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಶ್ರೀ ವೆಂಕಟರಮಣ ಸ್ವಾಮಿ, ಶ್ರೀ ಅಲಮೇಲು ಮಂಗಮ್ಮ, ಗಣಪತಿ ಹಾಗೂ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಂದ ಎಲ್ಲ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಲಾಡು ವಿತರಣೆ ಮಾಡಲಾಯಿತು.
ಇದೇ ಸಂದರ್ಭ ನಂಜನಗೂಡಿನ ಚಿನ್ಮಯಿ ಶ್ರೀವಾರಿ ಭಜನಾ ಮಂಡಳಿಯವರು ನಡೆಸಿಕೊಟ್ಟ ಭಜನೆ ಹಾಗೂ ಉಷಾ ವೇಣುಗೋಪಾಲ್ ರವರ ನೂಪುರ ನೃತ್ಯಾಂಜಲಿ ತಂಡದ ಮಕ್ಕಳು ನಡೆಸಿಕೊಟ್ಟ ಭರತನಾಟ್ಯದ ನೃತ್ಯ ರೂಪಕಗಳು ನೋಡುಗರ ಮನಸೂರೆಗೊಂಡವು.
ಬಳಿಕ ಭಜನಾ ಮಂಡಳಿ ಹಾಗೂ ನೃತ್ಯ ತಂಡದವರಿಗೆ ದೇವಾಲಯದ ನಿರ್ಮಾತೃಗಳಾದ ವಿಜಯಲಕ್ಷ್ಮಿನಾರಾಯಣ್ ರೆಡ್ಡಿ ಕುಟುಂಬದವರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು