1:20 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಕಾಲುವೆಹಳ್ಳಿ ಗ್ರಾಪಂಗೆ ಪಿಡಿಒ ರಜನಿಕಾಂತ್ ಬೇಡ, ಸಾಣೀಕೆರೆ ಗ್ರಾಪಂಗೆ ವರ್ಗಾಯಿಸಿ: ಗ್ರಾಪಂ ಸದಸ್ಯರ ಆಗ್ರಹ

01/03/2024, 17:12

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಡಿ.ಕೆ. ರಜನಿಕಾಂತ್ ಅವರನ್ನು ಮೂಲ ಸ್ಥಳಕ್ಕೆ ಸಾಣೀಕೆರೆಗೆ ಹಿಂತಿರುಗಿಸುವಂತೆ ಕಾಲುವೆಹಳ್ಳಿ ಗ್ರಾಪಂ ಸದಸ್ಯರು ತಾಪಂ ಸಿಇಒ ಗೆ ಮನವಿ ಮಾಡಿದ್ದಾರೆ.
ಕಾಲುವೆಹಳ್ಳಿ ಹಾಗೂ ಓಬಳಾಪುರ ಗ್ರಾಪಂ ಪಿಡಿಒ ಹುದ್ದೆ ಇರುವುದರಿಂದ ಅವರು ಕಾಲುವೆಹಳ್ಳಿ ಗ್ರಾಪಂ ಕಚೇರಿಗೆ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ. ನರೇಗಾ 15ನೇ ಹಣಕಾಸು ಯೋಜನೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿವೆ. ಹಾಗಾಗಿ ಅವರನ್ನು ಮೂಲ ಸ್ಥಳಕ್ಕೆ ಹಿಂದಿರುಗಿಸುವಂತೆ ಗ್ರಾಪಂ ಸದಸ್ಯರು ಆಗ್ರಹಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ರಜನಿಕಾಂತ್ ಇವರಿಗೆ ಕಾಲುವೆಹಳ್ಳಿ ಹಾಗೂ ಗ ಓಬಳಾಪುರ ಗ್ರಾಪಂ ಎರಡು ಗ್ರಾಪಂ ಪಿಡಿಒ ಹುದ್ದೆ ಮಾಡುವುದರಿಂದ ಕಾಲುವೆಹಳ್ಳಿ ಗ್ರಾಪಂ ಕಚೇರಿಗೆ ಸರಿಯಾದ ಸಮಯಕ್ಕೆ ಕಚೇರಿಗೆ ಬರುವುದಿಲ್ಲ. ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನಡುವೆ ಅಭಿವೃದ್ಧಿ ಅಧಿಕಾರಿಯ ಹೊಂದಾಣಿಕೆ ಇಲ್ಲದಿರುವುದು ಹಾಗೂ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಸೂಕ್ತ
ರೀತಿಯಾಗಿ ಸ್ಪಂದಿಸುವುದಿಲ್ಲ. ಬೇಜವಾಬ್ದಾರಿಯ ನಡತೆಯನ್ನು ತೊರಿಸುತ್ತಾರೆ. ಅಭಿವೃದ್ಧಿ ಅಧಿಕಾರಿಯ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಭಾವಿಗಳ ಕೈಗೊಂಬೆಯಾಗಿ ನಡೆದುಕೊಳ್ಳುತ್ತಾರೆ. ಈಗಾಗಲೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿಗಳಿಂದ
ಪ್ರಭಾರ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ನೀಡಿದ್ದರೂ ಸಹ ಆದೇಶವನ್ನು ಉಲ್ಲಂಘಿಸಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ರಜನಿಕಾಂತ್ ಡಿ.ಕೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾಲ್ಲೂಕು ಪಂಚಾಯತಿ ಆದೇಶದ ಪ್ರಕಾರ ಮೂಲ ಗ್ರಾಮ ಪಂಚಾಯತಿಗೆ ಸಾಣೀಕೆರೆ ಗ್ರಾಮ ಪಂಚಾತಿಗೆ ವರ್ಗಾವಣೆಗೊಳಿಸಿ ಆದೇಶಿಸಬೇಕು. ಇಲ್ಲಿಗೆ ಬೇರೆ ಪಿಡಿಒ ನೇಮಕಾತಿ ಮಾಡುವಂತೆ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ತಾಪಂ ಇಒ ಲಕ್ಷ್ಮಣ್ ಮಾತಾಡಿ ಪಿಡಿಒ ಗಳ ಬದಲಾವಣೆ ಮಾಡುವ ಅಧಿಕಾರ ನಮ್ಮ‌ ವ್ಯಾಪ್ತಿಯಲ್ಲಿ ಇಲ್ಲ. ಎಲ್ಲಾ ಪಂಚಾಯಿತಿ ಯವರು ಪಿಡಿಒ ಅವರು ಬೇಡ ಇವರು ಬೇಡ ಎಂದರೆ ಹೇಗೆ ಇರುವ ವ್ಯವಸ್ಥೆಯಲ್ಲಿ ಸರಿಪಡಿಸಿಕೊಳ್ಳಬೇಕು ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು