9:04 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಬೆಂಗಳೂರಿನ‌ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ

02/03/2024, 17:11

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ವರ್ಷದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು