12:29 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬೆಂಗಳೂರಿನ‌ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ

02/03/2024, 17:11

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ವರ್ಷದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು