11:19 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು