4:07 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದ. ಕ. ಮತ್ತು ಉಡುಪಿ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ‘ಹೊಂಬೆಳಕು -2024 ಉದ್ಘಾಟನೆ

02/03/2024, 22:17

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಗ್ರಾಮ ಸ್ವರಾಜ್ ಪ್ರತಿಷ್ಠಾನ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್‌ರಾಜ್ ಹಾಗೂ ನಗರ ಸ್ಥಳೀಯಾಡಳಿತ ಜನಪ್ರತಿನಿಧಿ ಹಾಗೂ ಪಂಚಾಯತ್ ಸಿಬ್ಬಂದಿಗಳ ಕ್ರೀಡೋತ್ಸವ – ಸಾಂಸ್ಕೃತಿಕ ಸ್ಪರ್ಧೆ – ‘ಹೊಂಬೆಳಕು -2024’ ಸ್ಥಳೀಯಾಡಳಿತದ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.


ಕಾರ್ಯಕ್ತಮ ಉದ್ಘಾಟಿಸಿ ಮಾತನಾಡಿದ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್,ಹೊಂಬೆಳಕು ಕಾರ್ಯಕ್ರಮದ ಮೂಲಕ ಎಲ್ಲಾ ಸದಸ್ಯ ಮಿತ್ರರಿಗೆ ಪ್ರೋತ್ಸಾಹ, ಆತ್ಮವಿಶ್ವಾಸ, ಧೈರ್ಯ ತುಂಬುವ ಕೆಲಸವಾಗಿದೆ. ರಾಜ್ಯದ, ದೇಶದ ಅಭಿವೃದ್ದಿಗೆ ಕಾಣದ ಕೈಗಳಾಗಿ ದುಡಿಯುವ ಮತ್ತು ತಮ್ಮದೇ ಆದ ಪ್ರಾಮಾಣಿಕ ಕೊಡುಗೆ ನೀಡುತ್ತಿದ್ದೀರಿ ಎಂದು ಹೇಳಿದರು.
ಸರ್ಕಾರದ ಕೆಲಸ ಕಾರ್ಯಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕಾರ್ಯ ಗ್ರಾಮ ಪಂಚಾಯತ್ ಸದಸ್ಯರಿಂದ ನಡೆಯುತ್ತದೆ. ನಾವೆಲ್ಲರೂ ಜತೆ ಜತೆಯಾಗಿ ಕೆಲಸ ಮಾಡುವ, ಹಾಗೆಯೇ ಗೆಲುವು ಮತ್ತು ಸೋಲು ಇದ್ದದ್ದೇ ನಾವು ಅದನ್ನು ಸ್ವೀಕರಿಸಿ ಮುನ್ನಡೆಯ ಬೇಕಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಂಚಾಯತ್ ಸದಸ್ಯರನ್ನು ಸೇರಿಸಿದಾಗ ಒಂದು ಕುಟುಂಬದ ಬಾಂಧವ್ಯದ ಜತೆ ಕ್ರೀಡೆಯಲ್ಲಿ ಭಾಗಿಯಾಗುವದ್ದರಿಂದ ಸ್ನೇಹದ ವಾತಾವರಣ ನಿರ್ಮಾಣವಾಗುತ್ತದೆ.


ರಾಜಕೀಯ ಏನೇ ಇದ್ದರೂ ಕೂಡ ಅಂತಿಮವಾಗಿ ಜನ ಸೇವೆ ಮಾಡುವುದೇ ಮುಖ್ಯವಾಗಿದೆ. ಚುನಾವಣೆ ಇದ್ದಾಗ ಮಾತ್ರ ರಾಜಕಾರಣ ಮಾಡುವ ಉಳಿದ ಸಮಯ ಅಭಿವೃದ್ದಿ ಬಗ್ಗೆ ಚಿಂತಿಸಿ ಕೆಲಸ ಮಾಡಬೇಕಾದರೆ ನಮ್ಮ ನಡುವೆ ಸ್ನೇಹಪರವಾದ ವಾತಾವರಣ ನಿರ್ಮಾಣವಾಗಲು ಕ್ರೀಡೆ ಸಹಕಾರಿಯಾಗಿದೆ. ಹಳೆಯ ಸಂಸ್ಕೃತಿಗಳೊಂದಿಗೆ ಹೊಸತನದೊಂದಿಗೆ ಕೆಲಸ ಕಾರ್ಯಗಳನ್ನು ಮಾಡುವ ಎಂದರು.









ಈ ಸಂದರ್ಭ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಟ್ರಸ್ಟ್‌ನ ಉದ್ಘಾಟನ ಕಾರ್ಯಕ್ರಮ ನಡೆಯಿತು. ಹೆಚ್ಚು ಬಾರಿ ಚುನಾಯಿತರಾದ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್ ಸದಸ್ಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ , ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವರಾದ ನರೇಂದ್ರ ಸ್ವಾಮಿ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ರಕ್ಷಿತ್ ಶಿವರಾಮ್, ಎ.ಸಿ. ವಿನಯ್ ರಾಜ್, ಪಾಲಿಕೆ ಆಯುಕ್ತ ಆನಂದ್, ಹೆಚ್ಚವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಾಳ ನಾರಾಯಣ ರಾವ್, ಹರ್ಷವರ್ಧನ್, ಬಲರಾಜ್, ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷ ಸುಭಾಶ್‌ಚಂದ್ರ ಶೆಟ್ಟಿ ಕುಳಾಲು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು