12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

45 ಲಕ್ಷ ರೂ. ವೆಚ್ಚದಲ್ಲಿ ಮಹಮಾಯಿ ದೇವಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

11/08/2021, 21:52

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ರಥಬೀದಿ ಮಹಮಾಯಿ ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕರು, ರಥಬೀದಿ ಮಹಮ್ಮಾಯಿ ಕೆರೆಯು ಅತ್ಯಂತ ಪುರಾತನ ಕೆರೆಯಾಗಿದ್ದು, ವರ್ಷಂಪ್ರತಿ ಗಣೇಶೋತ್ಸವ ಮತ್ತು ದಸರಾ ಸಂದರ್ಭದಲ್ಲಿ ನೂರಾರು ವಿಗ್ರಹಗಳನ್ನು ಕೆರೆಯಲ್ಲಿ ವಿಸರ್ಜಿಸಲಾಗುತ್ತಿದೆ. ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶೀಘ್ರದಲ್ಲೇ ಕೆರೆಯ ನವೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. 

ಬೆಳೆಯುತ್ತಿರುವ ನಗರದಲ್ಲಿ ಈ ಹಿಂದಿನ ಕಾಲದಲ್ಲಿ ಸಮೃದ್ಧವಾಗಿದ್ದ ಕೆರೆಗಳು ಜೀರ್ಣಾವಸ್ಥೆ ತಲುಪಿದ್ದು ಅವುಗಳೆಲ್ಲವನ್ನೂ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕೆಲವೊಂದು ಕೆರೆಗಳನ್ನು ಗುರುತಿಿದ್ದು ಅವುಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ‌ರ ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ದೇವಸ್ಥಾನದ ಪ್ರಮುಖರಾದ ಗೋವಿಂದ ಪೈ, ಶ್ರೀನಿವಾಸ್ ಎಸ್.ಕಾಮತ್, ಮಾರೂರು ಸುಧೀರ್ ಪೈ, ಪ್ರಕಾಶ್ ಕಾಮತ್, ಎಂ. ನಾಗೇಶ್ ಭಟ್, ಅರ್ಚಕರಾದ ಎಂ. ವಿಠಲ್ ಭಟ್, ಎಂ ಶಿವಾನಂದ ಭಟ್,ಎಂ ವಿವೇಕ್ ಭಟ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಸುರೇಶ್ ವಿ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು