3:26 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

45 ಲಕ್ಷ ರೂ. ವೆಚ್ಚದಲ್ಲಿ ಮಹಮಾಯಿ ದೇವಸ್ಥಾನ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

11/08/2021, 21:52

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ರಥಬೀದಿ ಮಹಮಾಯಿ ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕರು, ರಥಬೀದಿ ಮಹಮ್ಮಾಯಿ ಕೆರೆಯು ಅತ್ಯಂತ ಪುರಾತನ ಕೆರೆಯಾಗಿದ್ದು, ವರ್ಷಂಪ್ರತಿ ಗಣೇಶೋತ್ಸವ ಮತ್ತು ದಸರಾ ಸಂದರ್ಭದಲ್ಲಿ ನೂರಾರು ವಿಗ್ರಹಗಳನ್ನು ಕೆರೆಯಲ್ಲಿ ವಿಸರ್ಜಿಸಲಾಗುತ್ತಿದೆ. ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 45 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಶೀಘ್ರದಲ್ಲೇ ಕೆರೆಯ ನವೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದರು. 

ಬೆಳೆಯುತ್ತಿರುವ ನಗರದಲ್ಲಿ ಈ ಹಿಂದಿನ ಕಾಲದಲ್ಲಿ ಸಮೃದ್ಧವಾಗಿದ್ದ ಕೆರೆಗಳು ಜೀರ್ಣಾವಸ್ಥೆ ತಲುಪಿದ್ದು ಅವುಗಳೆಲ್ಲವನ್ನೂ ಅಭಿವೃದ್ಧಿಪಡಿಸಲಾಗುವುದು. ಈಗಾಗಲೇ ಕೆಲವೊಂದು ಕೆರೆಗಳನ್ನು ಗುರುತಿಿದ್ದು ಅವುಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಲೋಕೇಶ್ ಬೊಳ್ಳಾಜೆ, ಲೀಲಾವತಿ ಪ್ರಕಾಶ್, ಶೋಭಾ ರಾಜೇಶ್, ಪಾಲಿಕೆ ಸದಸ್ಯರಾದ ಪೂರ್ಣಿಮಾ ಎಂ, ಜಯಶ್ರೀ ಕುಡ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ‌ರ ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ದೇವಸ್ಥಾನದ ಪ್ರಮುಖರಾದ ಗೋವಿಂದ ಪೈ, ಶ್ರೀನಿವಾಸ್ ಎಸ್.ಕಾಮತ್, ಮಾರೂರು ಸುಧೀರ್ ಪೈ, ಪ್ರಕಾಶ್ ಕಾಮತ್, ಎಂ. ನಾಗೇಶ್ ಭಟ್, ಅರ್ಚಕರಾದ ಎಂ. ವಿಠಲ್ ಭಟ್, ಎಂ ಶಿವಾನಂದ ಭಟ್,ಎಂ ವಿವೇಕ್ ಭಟ್, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಸುರೇಶ್ ವಿ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು