2:08 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು