8:14 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು