3:04 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ‌ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು

03/03/2024, 12:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್ನು ಎಸೆದು ಹೋಗುತ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಧರ್ಮಸ್ಥಳ ಯಾತ್ರಿಗಳು ಸಾಗುವ ಮಾರ್ಗಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆಗಳ ರಾಶಿ ಬಿದ್ದಿರುತ್ತದೆ. ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಯನ್ನು ಪಾದಯಾತ್ರಿಗಳು ಬೇಕಾಬಿಟ್ಟಿ ಎಸೆದು ಹೋಗಿರುತ್ತಾರೆ.
ಬಣಕಲ್ ಮುಖ್ಯ ರಸ್ತೆಯಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಗಳು ಅನಾಥವಾಗಿ ಬಿದ್ದಿರುತ್ತವೆ.
ಧರ್ಮಸ್ಥಳ ಪಾದಯಾತ್ರೆಗಳ ವಿರುದ್ಧ ಸ್ಥಳೀಯರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಮಾವತಿ ನದಿಯ ಉದ್ದಕ್ಕೂ ಸ್ನಾನ ಹಾಗೂ ಶೌಚ ಮಾಡಿ ಹೇಮಾವತಿ ನದಿ ಮಲಿನವಾಗುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತರು ಪ್ರತಿ ವರ್ಷ ಪಾದಯಾತ್ರೆ ಕೈಗೊಳ್ಳುತ್ತಾರೆ. ಬಣಕಲ್ ಕೊಟ್ಟಿಗೆಹಾರ, ಚಾರ್ಮುಡಿ ಘಾಟ್ ಮೂಲಕ ಧರ್ಮಸ್ಥಳಕ್ಕೆ ಭಕ್ತರು ತೆರಳುತ್ತಾರೆ. ದಾರಿಯಲ್ಲಿ ಕೆಲವು ಸಂಘಟನೆಗಳು ಪಾದಯಾತ್ರಿಗಳಿಗೆ ಉಚಿತವಾಗಿ ಆಹಾರ ಒದಗಿಸುತ್ತಾರೆ. ಪ್ರತಿ ವರ್ಷವೂ ಇದೇ ಗೋಳು.

ಇತ್ತೀಚಿನ ಸುದ್ದಿ

ಜಾಹೀರಾತು