2:27 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ‌ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು

03/03/2024, 12:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್ನು ಎಸೆದು ಹೋಗುತ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಧರ್ಮಸ್ಥಳ ಯಾತ್ರಿಗಳು ಸಾಗುವ ಮಾರ್ಗಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆಗಳ ರಾಶಿ ಬಿದ್ದಿರುತ್ತದೆ. ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಯನ್ನು ಪಾದಯಾತ್ರಿಗಳು ಬೇಕಾಬಿಟ್ಟಿ ಎಸೆದು ಹೋಗಿರುತ್ತಾರೆ.
ಬಣಕಲ್ ಮುಖ್ಯ ರಸ್ತೆಯಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಗಳು ಅನಾಥವಾಗಿ ಬಿದ್ದಿರುತ್ತವೆ.
ಧರ್ಮಸ್ಥಳ ಪಾದಯಾತ್ರೆಗಳ ವಿರುದ್ಧ ಸ್ಥಳೀಯರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಮಾವತಿ ನದಿಯ ಉದ್ದಕ್ಕೂ ಸ್ನಾನ ಹಾಗೂ ಶೌಚ ಮಾಡಿ ಹೇಮಾವತಿ ನದಿ ಮಲಿನವಾಗುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತರು ಪ್ರತಿ ವರ್ಷ ಪಾದಯಾತ್ರೆ ಕೈಗೊಳ್ಳುತ್ತಾರೆ. ಬಣಕಲ್ ಕೊಟ್ಟಿಗೆಹಾರ, ಚಾರ್ಮುಡಿ ಘಾಟ್ ಮೂಲಕ ಧರ್ಮಸ್ಥಳಕ್ಕೆ ಭಕ್ತರು ತೆರಳುತ್ತಾರೆ. ದಾರಿಯಲ್ಲಿ ಕೆಲವು ಸಂಘಟನೆಗಳು ಪಾದಯಾತ್ರಿಗಳಿಗೆ ಉಚಿತವಾಗಿ ಆಹಾರ ಒದಗಿಸುತ್ತಾರೆ. ಪ್ರತಿ ವರ್ಷವೂ ಇದೇ ಗೋಳು.

ಇತ್ತೀಚಿನ ಸುದ್ದಿ

ಜಾಹೀರಾತು