11:00 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ‌ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು

03/03/2024, 12:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್ನು ಎಸೆದು ಹೋಗುತ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಧರ್ಮಸ್ಥಳ ಯಾತ್ರಿಗಳು ಸಾಗುವ ಮಾರ್ಗಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆಗಳ ರಾಶಿ ಬಿದ್ದಿರುತ್ತದೆ. ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಯನ್ನು ಪಾದಯಾತ್ರಿಗಳು ಬೇಕಾಬಿಟ್ಟಿ ಎಸೆದು ಹೋಗಿರುತ್ತಾರೆ.
ಬಣಕಲ್ ಮುಖ್ಯ ರಸ್ತೆಯಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಗಳು ಅನಾಥವಾಗಿ ಬಿದ್ದಿರುತ್ತವೆ.
ಧರ್ಮಸ್ಥಳ ಪಾದಯಾತ್ರೆಗಳ ವಿರುದ್ಧ ಸ್ಥಳೀಯರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಮಾವತಿ ನದಿಯ ಉದ್ದಕ್ಕೂ ಸ್ನಾನ ಹಾಗೂ ಶೌಚ ಮಾಡಿ ಹೇಮಾವತಿ ನದಿ ಮಲಿನವಾಗುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತರು ಪ್ರತಿ ವರ್ಷ ಪಾದಯಾತ್ರೆ ಕೈಗೊಳ್ಳುತ್ತಾರೆ. ಬಣಕಲ್ ಕೊಟ್ಟಿಗೆಹಾರ, ಚಾರ್ಮುಡಿ ಘಾಟ್ ಮೂಲಕ ಧರ್ಮಸ್ಥಳಕ್ಕೆ ಭಕ್ತರು ತೆರಳುತ್ತಾರೆ. ದಾರಿಯಲ್ಲಿ ಕೆಲವು ಸಂಘಟನೆಗಳು ಪಾದಯಾತ್ರಿಗಳಿಗೆ ಉಚಿತವಾಗಿ ಆಹಾರ ಒದಗಿಸುತ್ತಾರೆ. ಪ್ರತಿ ವರ್ಷವೂ ಇದೇ ಗೋಳು.

ಇತ್ತೀಚಿನ ಸುದ್ದಿ

ಜಾಹೀರಾತು