10:51 AM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು