3:03 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಶೀಘ್ರ ಬಿಡುಗಡೆ; ಉಡುಪಿ- ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರಿನಿಂದ ಡಾಲಿ ಧನಂಜಯ್ ಬಹುತೇಕ ಫೈನಲ್

04/03/2024, 12:01

ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಅಂತಿಮವಾಗಿದ್ದು, ಉಡುಪಿ- ಚಿಕ್ಕಮಗಳೂರು ಸಂಸತ್ ಕ್ಷೇತ್ರಕ್ಕೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಮೈಸೂರು ಕ್ಷೇತ್ರದಿಂದ ಖ್ಯಾತ ನಟ ಡಾಲಿ ಧನಂಜಯ ಅಭ್ಯರ್ಥಿತನ ಬಹುತೇಕ ಫೈನಲ್ ಆಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್‌ 10ರ ಒಳಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ.
ಸಿಎಂ, ಡಿಸಿಎಂ ಪ್ರತ್ಯೇಕ ಸರ್ವೆ ರಿಪೋರ್ಟ್ ಆಧಾರದ ಮೇಲೆ ಸಿದ್ದಪಡಿಸಿರುವ ಪ್ರತ್ಯೇಕ ಅಭ್ಯರ್ಥಿಗಳ ಪಟ್ಟಿಯನ್ನು ಈ ಸಂದರ್ಭದಲ್ಲಿ ಸಲ್ಲಿಸಲಿದ್ದಾರೆ.
ಮೊದಲ ಪಟ್ಟಿಯಲ್ಲಿ ಉಡುಪಿ- ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ ಮುಂತಾದ ಕ್ಷೇತ್ರಗಳಿವೆ.
*ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ*
*ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ.
“ಮೈಸೂರು – ಎನ್.ಲಕ್ಷ್ಮಣ/ಡಾಲಿ ಧನಂಜಯ್.
*ಮಂಡ್ಯ – ಸ್ಟಾರ್ ಚಂದ್ರು.
*ತುಮಕೂರು – ಎಸ್‌.ಪಿ.ಮುದ್ದಹನುಮೇಗೌಡ/ ಡಿ.ಸಿ.ಗೌರಿಶಂಕರ್.
*ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ.
*ಕೋಲಾರ – ಕೆ.ಎಚ್.ಮುನಿಯಪ್ಪ.
*ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ.
*ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್.
*ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಹರ್ಷದ್/ ಟಬೂ ಗುಂಡೂರಾವ್.
*ಬೆಂಗಳೂರು ಉತ್ತರ – ಕುಸುಮಾ ಹನುಮಂತರಾಯಪ್ಪ.
*ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ.
*ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

ಇತ್ತೀಚಿನ ಸುದ್ದಿ

ಜಾಹೀರಾತು