3:13 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಶೀಘ್ರ ಬಿಡುಗಡೆ; ಉಡುಪಿ- ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರಿನಿಂದ ಡಾಲಿ ಧನಂಜಯ್ ಬಹುತೇಕ ಫೈನಲ್

04/03/2024, 12:01

ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಅಂತಿಮವಾಗಿದ್ದು, ಉಡುಪಿ- ಚಿಕ್ಕಮಗಳೂರು ಸಂಸತ್ ಕ್ಷೇತ್ರಕ್ಕೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಮೈಸೂರು ಕ್ಷೇತ್ರದಿಂದ ಖ್ಯಾತ ನಟ ಡಾಲಿ ಧನಂಜಯ ಅಭ್ಯರ್ಥಿತನ ಬಹುತೇಕ ಫೈನಲ್ ಆಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್‌ 10ರ ಒಳಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ.
ಸಿಎಂ, ಡಿಸಿಎಂ ಪ್ರತ್ಯೇಕ ಸರ್ವೆ ರಿಪೋರ್ಟ್ ಆಧಾರದ ಮೇಲೆ ಸಿದ್ದಪಡಿಸಿರುವ ಪ್ರತ್ಯೇಕ ಅಭ್ಯರ್ಥಿಗಳ ಪಟ್ಟಿಯನ್ನು ಈ ಸಂದರ್ಭದಲ್ಲಿ ಸಲ್ಲಿಸಲಿದ್ದಾರೆ.
ಮೊದಲ ಪಟ್ಟಿಯಲ್ಲಿ ಉಡುಪಿ- ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ ಮುಂತಾದ ಕ್ಷೇತ್ರಗಳಿವೆ.
*ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ*
*ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ.
“ಮೈಸೂರು – ಎನ್.ಲಕ್ಷ್ಮಣ/ಡಾಲಿ ಧನಂಜಯ್.
*ಮಂಡ್ಯ – ಸ್ಟಾರ್ ಚಂದ್ರು.
*ತುಮಕೂರು – ಎಸ್‌.ಪಿ.ಮುದ್ದಹನುಮೇಗೌಡ/ ಡಿ.ಸಿ.ಗೌರಿಶಂಕರ್.
*ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ.
*ಕೋಲಾರ – ಕೆ.ಎಚ್.ಮುನಿಯಪ್ಪ.
*ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ.
*ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್.
*ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಹರ್ಷದ್/ ಟಬೂ ಗುಂಡೂರಾವ್.
*ಬೆಂಗಳೂರು ಉತ್ತರ – ಕುಸುಮಾ ಹನುಮಂತರಾಯಪ್ಪ.
*ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ.
*ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

ಇತ್ತೀಚಿನ ಸುದ್ದಿ

ಜಾಹೀರಾತು