3:53 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ

04/03/2024, 16:53

ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್​ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿದೆ. ಗಾಯಗೊಂಡಿರುವ ಮೂವರೂ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಕೇರಳದ ಮಲ್ಲಪುರಂ ಜಿಲ್ಲೆಯ 23 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಈತನನ್ನು ಇತರ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯನ್ನು ಖಂಡಿಸಿ ಟ್ವೀಟ್​ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪಿಯು ಕಾಲೇಜಿನ ಹೆಣ್ಣು ಮಕ್ಕಳ ಮೇಲೆ ಆಸಿಡ್ ಎರಚಿರುವ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು