3:57 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ 

11/08/2021, 23:23

ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಪ್ರದಾನ ಮಾಡಿದರು.
ನಂತರ ಮಾತನಾಡಿದ ಅವರು, ಯುವ ಜನರು ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಕರೆ ನೀಡಿದರು.

ಕಾರ್ಮೆಲ್ ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸಿದರು.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ಕಾಲೇಜುಗಳು ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದುಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯ ಸದಸ್ಯ ಮೆಲ್ವಿನ್ ತಿಳಿಸಿದರು. 

ಪ್ರತಿಯೊಂದು ಕಾಲೇಜು ಕೂಡ ಸ್ವಚ್ಛತಾ ಹಾಗೂ ಜಲಶಕ್ತಿ ಯೋಜನೆಯನ್ನು ಕಾಲೇಜಿನಲ್ಲಿ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಲತಾ ಫರ್ನಾಂಡಿಸ್ ಎ. ಸಿ., ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ನಾಯಕ ಮೆಲ್ವಿನ್ , ನಾಯಕಿ ತೇಜಸ್ವಿ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಮಧುರಾ ಕೆ, ದೀಪ್ತಿ ಡಿಸೋಜಾ,  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು