10:30 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ 

11/08/2021, 23:23

ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಪ್ರದಾನ ಮಾಡಿದರು.
ನಂತರ ಮಾತನಾಡಿದ ಅವರು, ಯುವ ಜನರು ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಕರೆ ನೀಡಿದರು.

ಕಾರ್ಮೆಲ್ ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸಿದರು.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ಕಾಲೇಜುಗಳು ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದುಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯ ಸದಸ್ಯ ಮೆಲ್ವಿನ್ ತಿಳಿಸಿದರು. 

ಪ್ರತಿಯೊಂದು ಕಾಲೇಜು ಕೂಡ ಸ್ವಚ್ಛತಾ ಹಾಗೂ ಜಲಶಕ್ತಿ ಯೋಜನೆಯನ್ನು ಕಾಲೇಜಿನಲ್ಲಿ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಲತಾ ಫರ್ನಾಂಡಿಸ್ ಎ. ಸಿ., ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ನಾಯಕ ಮೆಲ್ವಿನ್ , ನಾಯಕಿ ತೇಜಸ್ವಿ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಮಧುರಾ ಕೆ, ದೀಪ್ತಿ ಡಿಸೋಜಾ,  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು