1:43 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ‘ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್’ ಪ್ರಶಸ್ತಿ ಪ್ರದಾನ 

11/08/2021, 23:23

ಬಂಟ್ವಾಳ(reporterkarnataka.com): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ಬಂಟ್ವಾಳ ಮೊಡಂಕಾಪಿನ ಕಾರ್ಮೆಲ್ ಕಾಲೇಜ್ ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಪ್ರದಾನ ಮಾಡಿದರು.
ನಂತರ ಮಾತನಾಡಿದ ಅವರು, ಯುವ ಜನರು ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಕರೆ ನೀಡಿದರು.

ಕಾರ್ಮೆಲ್ ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಘಿಸಿದರು.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ಕಾಲೇಜುಗಳು ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದುಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ  ಮಂಡಳಿಯ ಸದಸ್ಯ ಮೆಲ್ವಿನ್ ತಿಳಿಸಿದರು. 

ಪ್ರತಿಯೊಂದು ಕಾಲೇಜು ಕೂಡ ಸ್ವಚ್ಛತಾ ಹಾಗೂ ಜಲಶಕ್ತಿ ಯೋಜನೆಯನ್ನು ಕಾಲೇಜಿನಲ್ಲಿ ಕಾರ್ಯರೂಪಕ್ಕೆ ತರಬೇಕೆಂದು ವಿನಂತಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಲತಾ ಫರ್ನಾಂಡಿಸ್ ಎ. ಸಿ., ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ನಾಯಕ ಮೆಲ್ವಿನ್ , ನಾಯಕಿ ತೇಜಸ್ವಿ, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಮಧುರಾ ಕೆ, ದೀಪ್ತಿ ಡಿಸೋಜಾ,  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು