2:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

04/03/2024, 20:06

ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ‌. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಠಾಣಾ ಅಕ್ರ 39/2018 ಕಲಂ: 379, 392, 397, 411, 414 ಐಪಿಸಿ ಮತ್ತು ಕೊಣಾಜೆ ಪೊಲೀಸ್ ಠಾಣಾ ಅಕ್ರ: 68/2018 ಕಲಂ: 379 ಮತ್ತು 4, 5, 7, 8, 9, 11,12 ಗೋ ಹತ್ಯೆ ನಿಷೇದ ಕಾಯ್ದೆಯಂತೆ ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಉಳ್ಳಾಲ ತಾಲೂಕು ನಾಟೆಕಲ್ ಎಂಬಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ನಿರ್ದೇಶನದಂತೆ, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರುಗಳಾದ ಸಿದ್ದಾರ್ಥ ಗೋಯಲ್ ಹಾಗೂ
ದಿನೇಶ್ ಕುಮಾರ್ ಅವರ ಮಾರ್ಗದರ್ಶನ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯಾ ಎನ್. ನಾಯಕ ಮತ್ತು ಕೊಣಾಜೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರವೀಂದ್ರ ಸಿ ಮುಂದಾಳತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್., ಪುನೀತ್ ಗಾಂವಕಾರ್ ಸಿಬ್ಬಂದಿಗಳು
ಪತ್ತೆ ಮಾಡಿ ದಸ್ತಗಿರಿ ಮಾಡಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು