1:34 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

4 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

04/03/2024, 20:06

ಮಂಗಳೂರು(reporterkarnataka.com):ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಪೈವಳಿಕೆ ಗ್ರಾಮದ ಪಲ್ಲಂ ಹೌಸ್ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ‌. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಠಾಣಾ ಅಕ್ರ 39/2018 ಕಲಂ: 379, 392, 397, 411, 414 ಐಪಿಸಿ ಮತ್ತು ಕೊಣಾಜೆ ಪೊಲೀಸ್ ಠಾಣಾ ಅಕ್ರ: 68/2018 ಕಲಂ: 379 ಮತ್ತು 4, 5, 7, 8, 9, 11,12 ಗೋ ಹತ್ಯೆ ನಿಷೇದ ಕಾಯ್ದೆಯಂತೆ ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಉಳ್ಳಾಲ ತಾಲೂಕು ನಾಟೆಕಲ್ ಎಂಬಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ನಿರ್ದೇಶನದಂತೆ, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರುಗಳಾದ ಸಿದ್ದಾರ್ಥ ಗೋಯಲ್ ಹಾಗೂ
ದಿನೇಶ್ ಕುಮಾರ್ ಅವರ ಮಾರ್ಗದರ್ಶನ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯಾ ಎನ್. ನಾಯಕ ಮತ್ತು ಕೊಣಾಜೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರವೀಂದ್ರ ಸಿ ಮುಂದಾಳತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್., ಪುನೀತ್ ಗಾಂವಕಾರ್ ಸಿಬ್ಬಂದಿಗಳು
ಪತ್ತೆ ಮಾಡಿ ದಸ್ತಗಿರಿ ಮಾಡಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು