5:10 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಾರ್ಚ್ 10-15: ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವವು

05/03/2024, 14:28

ಮಂಗಳೂರು(reporterkarnataka.com): ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾರ್ಚ್ 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂಡಿತ್ತಾಯ ದೈವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಹಿತಿ ನೀಡಿದರು.
ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು, ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ ಗುಡಿಯು ನಿರ್ಮಾಣಗೊಂಡಿದೆ. ಮಾ.13ರಂದು ಶ್ರೀ ಮುಂಡಿತ್ತಾಯ, ಮಹಿಷಂದಾಯ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಅಣ್ಣಪ್ಪ ಪಂಜುರ್ಲಿ, ಜಾನುನಾಯಕ, ಪಿಲಿಚಂಡಿ, ಕಲ್ಲುರ್ಟಿ ಕಲ್ಕುಡ ದೈವಗಳ ನೇಮೋತ್ಸವವು ಅಘೋರ ತಾಂತ್ರಿಕ್ ದೇರೆಬೈಲ್ ಬ್ರಹ್ಮಶ್ರೀ ವಿಠಲದಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು ಎಂದು ಅವರು ತಿಳಿಸಿದರು.
ಮಾ.10ರಂದು ಮಧ್ಯಾಹ್ನ 3 ಗಂಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ ನಡೆಯಲಿದೆ. ಮಾ.11ರ ರಾತ್ರಿ 7 ಗಂಟೆಯಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ, 12ರಂದು ರಾತ್ರಿ 8 ಗಂಟೆಯಿಂದ ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
ಮಾ.15ರಂದು ಸಂಜೆ 6 ಗಂಟೆಯಿಂದ ಕಟೀಲು ಮೇಳದಿಂದ ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾ.16ರಿಂದ ವಾರ್ಷಿಕ ದೊಂಪದ ಬಲಿ ಜಾತ್ರೆ, ಮಾ.20ರಿಂದ 28ರವರೆಗೆ ವಾರ್ಷಿಕ ನೇಮೋತ್ಸವ ಜರುಗಲಿದೆ. ಪ್ರತಿನಿತ್ಯ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಬಡಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪೆರ್ಲ ರಾಮಕೃಷ್ಣ ನಾಯಕ್, ರಘುರಾಮ್ ಶೆಟ್ಟಿ, ಕಣ್ಣೂರು ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಅಳಕೆ ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಕೋಟ್ಯಾನ್, ನಿಖಿತ್ ಕೊಟ್ಟಾರಿ
ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು