6:42 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಾರ್ಚ್ 10-15: ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವವು

05/03/2024, 14:28

ಮಂಗಳೂರು(reporterkarnataka.com): ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾರ್ಚ್ 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂಡಿತ್ತಾಯ ದೈವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಹಿತಿ ನೀಡಿದರು.
ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು, ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ ಗುಡಿಯು ನಿರ್ಮಾಣಗೊಂಡಿದೆ. ಮಾ.13ರಂದು ಶ್ರೀ ಮುಂಡಿತ್ತಾಯ, ಮಹಿಷಂದಾಯ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಅಣ್ಣಪ್ಪ ಪಂಜುರ್ಲಿ, ಜಾನುನಾಯಕ, ಪಿಲಿಚಂಡಿ, ಕಲ್ಲುರ್ಟಿ ಕಲ್ಕುಡ ದೈವಗಳ ನೇಮೋತ್ಸವವು ಅಘೋರ ತಾಂತ್ರಿಕ್ ದೇರೆಬೈಲ್ ಬ್ರಹ್ಮಶ್ರೀ ವಿಠಲದಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು ಎಂದು ಅವರು ತಿಳಿಸಿದರು.
ಮಾ.10ರಂದು ಮಧ್ಯಾಹ್ನ 3 ಗಂಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ ನಡೆಯಲಿದೆ. ಮಾ.11ರ ರಾತ್ರಿ 7 ಗಂಟೆಯಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ, 12ರಂದು ರಾತ್ರಿ 8 ಗಂಟೆಯಿಂದ ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
ಮಾ.15ರಂದು ಸಂಜೆ 6 ಗಂಟೆಯಿಂದ ಕಟೀಲು ಮೇಳದಿಂದ ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾ.16ರಿಂದ ವಾರ್ಷಿಕ ದೊಂಪದ ಬಲಿ ಜಾತ್ರೆ, ಮಾ.20ರಿಂದ 28ರವರೆಗೆ ವಾರ್ಷಿಕ ನೇಮೋತ್ಸವ ಜರುಗಲಿದೆ. ಪ್ರತಿನಿತ್ಯ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಬಡಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪೆರ್ಲ ರಾಮಕೃಷ್ಣ ನಾಯಕ್, ರಘುರಾಮ್ ಶೆಟ್ಟಿ, ಕಣ್ಣೂರು ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಅಳಕೆ ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಕೋಟ್ಯಾನ್, ನಿಖಿತ್ ಕೊಟ್ಟಾರಿ
ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು