3:41 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು

05/03/2024, 15:33

*ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂದು ಬೆಳಗ್ಗೆ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದಾಗ ರೈಲು ಬರುವುದನ್ನು ಗಮನಿಸದೇ ಮೈ ಮರೆತು ಚಲಿಸುತ್ತಿದ್ದ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಮನು ಕುಮಾರ್ 27 ವರ್ಷದ ಮೃತ ವ್ಯಕ್ತಿಯಾಗಿ ಎಂದು ತಿಳಿದು ಬಂದಿದೆ.


ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.
ಬೆಳಂ ಬೆಳಗ್ಗೆ ಬಯಲು ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಬಿಹಾರದಲ್ಲಿದ್ದ ತನ್ನ ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ರೈಲ್ವೆ ಟ್ರ್ಯಾಕ್ ದಾಟುತ್ತಿರುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಮೈಸೂರುಗೆ ತೆರಳುತ್ತಿದ್ದ ರೈಲು ಆಕಸ್ಮಿಕವಾಗಿ ತಾಕಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲೆ ಸಾವನಪ್ಪಿದ್ದಾರೆ.
ರೈಲು ಬರುತ್ತಿರುವುದನ್ನು ಕಾಣದೆ ಮೈ ಮರೆತ ಪರಿಣಾಮ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು