7:00 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು

05/03/2024, 15:33

*ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂದು ಬೆಳಗ್ಗೆ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದಾಗ ರೈಲು ಬರುವುದನ್ನು ಗಮನಿಸದೇ ಮೈ ಮರೆತು ಚಲಿಸುತ್ತಿದ್ದ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಮನು ಕುಮಾರ್ 27 ವರ್ಷದ ಮೃತ ವ್ಯಕ್ತಿಯಾಗಿ ಎಂದು ತಿಳಿದು ಬಂದಿದೆ.


ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.
ಬೆಳಂ ಬೆಳಗ್ಗೆ ಬಯಲು ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಬಿಹಾರದಲ್ಲಿದ್ದ ತನ್ನ ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ರೈಲ್ವೆ ಟ್ರ್ಯಾಕ್ ದಾಟುತ್ತಿರುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಮೈಸೂರುಗೆ ತೆರಳುತ್ತಿದ್ದ ರೈಲು ಆಕಸ್ಮಿಕವಾಗಿ ತಾಕಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲೆ ಸಾವನಪ್ಪಿದ್ದಾರೆ.
ರೈಲು ಬರುತ್ತಿರುವುದನ್ನು ಕಾಣದೆ ಮೈ ಮರೆತ ಪರಿಣಾಮ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು