2:34 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು

05/03/2024, 15:33

*ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂದು ಬೆಳಗ್ಗೆ ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ ಮಾಡಿಕೊಂಡು ಮಾತನಾಡುತ್ತಿದ್ದಾಗ ರೈಲು ಬರುವುದನ್ನು ಗಮನಿಸದೇ ಮೈ ಮರೆತು ಚಲಿಸುತ್ತಿದ್ದ ರೈಲಿಗೆ ತಾಕಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಮನು ಕುಮಾರ್ 27 ವರ್ಷದ ಮೃತ ವ್ಯಕ್ತಿಯಾಗಿ ಎಂದು ತಿಳಿದು ಬಂದಿದೆ.


ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕೆಲವು ವರ್ಷಗಳಿಂದ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.
ಬೆಳಂ ಬೆಳಗ್ಗೆ ಬಯಲು ಶೌಚಾಲಯಕ್ಕೆ ತೆರಳಿದ ಸಂದರ್ಭದಲ್ಲಿ ಬಿಹಾರದಲ್ಲಿದ್ದ ತನ್ನ ಪತ್ನಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಮಾತನಾಡಿಕೊಂಡು ರೈಲ್ವೆ ಟ್ರ್ಯಾಕ್ ದಾಟುತ್ತಿರುವ ಸಂದರ್ಭದಲ್ಲಿ ಚಾಮರಾಜನಗರ ಕಡೆಯಿಂದ ಮೈಸೂರುಗೆ ತೆರಳುತ್ತಿದ್ದ ರೈಲು ಆಕಸ್ಮಿಕವಾಗಿ ತಾಕಿದ ಪರಿಣಾಮ ಬಿಹಾರ ಮೂಲದ ಕಾರ್ಮಿಕ ಸ್ಥಳದಲ್ಲೆ ಸಾವನಪ್ಪಿದ್ದಾರೆ.
ರೈಲು ಬರುತ್ತಿರುವುದನ್ನು ಕಾಣದೆ ಮೈ ಮರೆತ ಪರಿಣಾಮ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿಗಳಾದ ಶ್ರೀನಿವಾಸ್, ಕುಮಾರ್, ಭೇಟಿ ನೀಡಿ, ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು