2:11 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಅಲರ್ಟ್

05/03/2024, 16:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ದೇವಿರಮ್ಮನಹಳ್ಳಿ ವೃತ್ತದ ಬಳಿ ಬಿಜೆಪಿ ಪಕ್ಷದ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಂಡಿದ್ದ ತಿರಂಗ ಯಾತ್ರೆಗೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕರು ದೇಶವನ್ನು ಇಬ್ಬಾಗ ಮಾಡುವ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ. ಸುರೇಶ್ ಅವರು ಸಾಕಷ್ಟು ದೇಶವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ರಾಜ್ಯದ ಶಕ್ತಿ ಕೇಂದ್ರ ಎನಿಸಿಕೊಂಡಿರುವ ವಿಧಾನಸೌಧದ ಮುಂಭಾಗದಲ್ಲಿ ಶತ್ರು ದೇಶ ಎನಿಸಿಕೊಂಡಿರುವ ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಯಾವುದೇ ರೀತಿ ಕ್ರಮವನ್ನು ಕೈಗೊಂಡಿಲ್ಲ. ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಆದಾಗನಿಂದಲೂ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಯುವಕರು ಮೋದಿಯವರ ಕೈಯನ್ನು ಬಲಪಡಿಸಬೇಕು ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಒಲೈಕೆ ಮಾಡುವುದನ್ನು ಬಿಡಬೇಕು. ಈ ನಡೆಯನ್ನು ನಾವು ಖಂಡಿಸುತ್ತೇವೆ ಮುಂಬರುವ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗಿದ್ದೇವೆ ಮತ್ತೆ ಈ ದೇಶದಲ್ಲಿ ನರೇಂದ್ರ ಮೋದಿಯವರನ್ನೇ ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ನಂಜನಗೂಡಿನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ, ಯುವ ಮೋರ್ಚಾದ ಅಧ್ಯಕ್ಷ ಸಾಮ್ರಾಟ್, ನಗರಾಧ್ಯಕ್ಷ ಸಿದ್ದರಾಜು, ಬಿಜೆಪಿ ಮಾಧ್ಯಮ ವಕ್ತಾರ ಶ್ರೀನಿವಾಸ ರೆಡ್ಡಿ, ಮಹೇಶ್, ಉಮೇಶ್ ಮೋದಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು