9:44 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಪ್ರೊ.ಪಿ.ಎಲ್.ಧರ್ಮ ಮಂಗಳೂರು ವಿವಿಯ 10ನೇ ಕುಲಪತಿಯಾಗಿ ನೇಮಕ

05/03/2024, 22:40

 

ಮಂಗಳೂರು (Reporter Karnataka): ಮಂಗಳೂರು ವಿಶ್ವವಿದ್ಯಾನಿಲಯದ 10ನೇ ಕುಲಪತಿಯಾಗಿ ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ. ಪಿ.ಎಲ್. ಧರ್ಮ ಅವರು ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮಿನ್ ಅವರಿಂದ ಅಧಿಕಾರ ವಹಿಸಿಕೊಂಡರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿ ಹೊಂದಿದ್ದರು. ಬಳಿಕ ಕುಲಪತಿ ಹುದ್ದೆ ಖಾಲಿ ಇತ್ತು. ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಜೂ.2ರಿಂದ “ಪ್ರಭಾರ ಕುಲಪತಿ’ಗಳಾಗಿ ಕರ್ತವ್ಯದಲ್ಲಿದ್ದರು.

ಅಧಿಕಾರ ಸ್ವೀಕರಿಸಿದ ದಿನದಿಂದ ನಾಲ್ಕು ವರ್ಷಗಳವರೆಗೆ ಅಥವಾ 67 ವರ್ಷ ಭರ್ತಿಯಾಗುವವರೆಗೆ, ಇವೆರಡಲ್ಲಿ ಯಾವುದು ಮೊದಲೋ ಆ ದಿನಾಂಕದವರೆಗೆ ಪ್ರೊ.ಪಿ.ಎಲ್.ಧರ್ಮ ಕುಲಪತಿಯಾಗಿ ಮುಂದುವರಿಯಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿರುವ ರಾಜ್ಯಪಾಲ ಥಾವರಚಂದ್‌ ಗೆಹ್ಲೋಠ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು